ದಾವೀದನು, “ನಾಹಾಷನು ನನಗೆ ಸ್ನೇಹ ತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ದೂತರನ್ನು ಕಳುಹಿಸಿದನು. ಅವರು ಹಾನೂನನನ್ನು ಸಂತೈಸುವುದಕ್ಕಾಗಿ ಅಮ್ಮೋನಿಯರ ದೇಶಕ್ಕೆ ಬಂದರು.