ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.