ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರಿಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದುತಂದು, ವಧಿಸಿದರು. “ಇವನು ಸರ್ವೇಶ್ವರನ ನೈಜಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ?” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳಲು ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
Go to Home Page