“ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.