ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.
Go to Home Page