ನೀವು ಸರ್ವೇಶ್ವರನಿಗೆ ಅಭಿಮುಖರಾದರೆ, ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ಮರಳಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಸರ್ವೇಶ್ವರ ದಯಾವಂತರು, ಕನಿಕರವುಳ್ಳವರು. ತಮಗೆ ಅಭಿಮುಖರಾಗುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”