ರಾಜ ನನಗೆ, “ನೀನು ಕಳೆಗುಂದಿದವನಾಗಿರುವೆ, ಏಕೆ? ನಿನ್ನ ದೇಹಾರೋಗ್ಯ ಚೆನ್ನಾಗಿದೆಯಲ್ಲವೆ? ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣ ಇರಲಾರದು,” ಎಂದು ಹೇಳಿದ. ನನಗೆ ಮಹಾಭೀತಿಯುಂಟಾಯಿತು.