ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.