ಎಸ್ತೇರಳ ದಾಸಿಯರೂ ಕಂಚುಕಿಗಳೂ ಈ ವಿಷಯವನ್ನು ಆಕೆಗೆ ತಿಳಿಸಿದಾಗ ಆಕೆ ಬಹು ವ್ಯಸನಾಕ್ರಾಂತಳಾದಳು. ಉಟ್ಟ ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಮೊರ್ದೆಕೈಗೆ ಉಡುಪನ್ನು ಕಳುಹಿಸಿಕೊಟ್ಟಳು. ಅವನಾದರೋ ಅವುಗಳನ್ನು ಸ್ವೀಕರಿಸಲಿಲ್ಲ.