ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.
Go to Home Page