ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.