ಸ್ವಾಮಿ ಇಂತೆನ್ನುತ್ತಾರೆ : “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.