ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.