ಇಂತೆನ್ನುವರವರು ಯೆಹೂದ ಜನತೆಗೆ : “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.