ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.