ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”
Go to Home Page