ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.