ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.
Go to Home Page