ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”