ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.