ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.