ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.