“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.