ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.
Go to Home Page