ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು.