ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.