ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.