ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.