ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.