ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.