ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.