ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.
Go to Home Page