ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.