ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.