“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.