“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.