ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.