ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?