ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.