ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು.