ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.