ಅವರ ಸ್ವಂತ ಇಷ್ಟದಿಂದಲೇ ಮುಂದೆ ಬಂದಿದ್ದಾರೆ. ಹಾಗೆ ಮಾಡುವುದು ಅವರ ಕರ್ತವ್ಯವೂ ಹೌದು. ಏಕೆಂದರೆ, ಯೆಹೂದ್ಯರ ಆಧ್ಯಾತ್ಮಿಕ ಸಂಪತ್ತಿನಲ್ಲಿ ಪಾಲುಗಾರರಾಗಿರುವ ಅನ್ಯಧರ್ಮೀಯರು ತಮ್ಮ ಐಹಿಕಸಂಪತ್ತಿನಲ್ಲಿ ಅವರಿಗೆ ಪಾಲು ನೀಡಲು ಕರ್ತವ್ಯಬದ್ಧರಾಗಿದ್ದಾರೆ.