ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.