ಅವನು ಮತ್ತು ಅವನ ಸಂಗಡ ಬಂದಿದ್ದವರು ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದು, “ನನ್ನೊಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದ ಆ ಸೇವಕ.