ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.