ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.