ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.