ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.