ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.