ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.